ಬೆಳಗಾವಿಯಲ್ಲಿ 16 ರಂದು ಪತ್ರಿಕಾ ದಿನಾಚರಣೆ ಮತ್ತು ಸಾಧಕರಿಗೆ ಸನ್ಮಾನ

Murugesh Shivapuji
ಬೆಳಗಾವಿಯಲ್ಲಿ 16 ರಂದು ಪತ್ರಿಕಾ ದಿನಾಚರಣೆ ಮತ್ತು ಸಾಧಕರಿಗೆ ಸನ್ಮಾನ
WhatsApp Group Join Now

ಬೆಳಗಾವಿ: ಕರ್ನಾಟಕ ಪತ್ರಕರ್ತರ ಸಂಘ (ರಿ) ಹಾಗೂ ಕರ್ನಾಟಕ ಜರ್ನಲಿಸ್ಟ್ಸ್ ಯೂನಿಯನ್ (ರಿ) ಟ್ರಸ್ಟ್ ಸಹಯೋಗದಲ್ಲಿ ನಗರದ ಎಸ್‌ಜಿಬಿಐಟಿ ಸಭಾಗ್ರಹ ನಾಗನೂರ ರುದ್ರಕ್ಷಿಮಠದಲ್ಲಿ ಆ.16ರ ಬೆಳಗ್ಗೆ 10 ಗಂಟೆಗೆ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ನಾಗನೂರು ರುದ್ರಾಕ್ಷಿ ಮಠದ ಪೀಠಾಧಿಕಾರಿ, ಕರ್ನಾಟಕ ಜರ್ನಲಿಸ್ಟ್ಸ್ ಯೂನಿಯನ್ (ರಿ) ಟ್ರಸ್ಟ್‌ನ ಗೌರವಾಧ್ಯಕ್ಷರಾದ ಡಾ.ಅಲ್ಲಮಪ್ರಭು ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ ಹಾಗೂ ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಮುರುಗೇಶ ಶಿವಪೂಜಿ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯಅತಿಥಿಗಳಾಗಿ ಬೆಳಗಾವಿ ವಿಶ್ವೇಶ್ವರ ತಾಂತ್ರಿಕ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಪ್ರಸಾದ್‌ ರಾಂಪೂರೆ, ಬೆಳಗಾವಿ ಪೊಲೀಸ್‌ ಉಪಆಯುಕ್ತ ನಾರಾಯಣ ಭರಮನಿ, ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತ ಕಾರ್ತಿಕ.ಎಂ, ಬೆಳಗಾವಿ ವಾರ್ತಾ ಇಲಾಖೆಯ ಉಪನಿರ್ದೇಶಕ ಗುರುನಾಥ ಕಡಬೂರ, ಬೆಳಗಾವಿ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನಾಗರಾಜ ಬಾಳೆಹೊಸೂರು ಸೇರಿದಂತೆ ಕನ್ನಡಪ್ರಭ ಬೆಳಗಾವಿ ಆವೃತ್ತಿಯ ಸ್ಥಾನಿಕ ಸಂಪಾದಕ ಬ್ರಹ್ಮಾನಂದ ಹಡಗಲಿ ಆಗಮಿಸುವರು. ನಾಡೋಜ ಪತ್ರಿಕೆಯ ಸಂಪಾದಕ ಎಸ್‌.ಬಿ.ಧಾರವಾಡಕರ, ಬೆಳಗಾವಿ ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷೆ ಮಂಗಲಾ ಮೆಟಗುಡ್ಡ, ಕರ್ನಾಟಕ ಪತ್ರಕರ್ತರ ಸಂಘದ ಕಾನೂನು ಸಲಹೆಗಾರ ಬಸವರಾಜ ರೊಟ್ಟಿ ಉಪಸ್ಥಿತರಿರುವರು. ಇದೇ ಸಂದರ್ಭದಲ್ಲಿ ಪತ್ರಿಕೋದ್ಯಮದಲ್ಲಿ ಅನುಪಮ ಸೇವೆ ಸಲ್ಲಿಸಿರುವ ಹಿರಿಯ ವರದಿಗಾರರಾದ ಬೆಳಗಾವಿ ಇಂಡಿಯನ್‌ ಎಕ್ಸಪ್ರೆಸ್‌ನ ಅಸೋಸಿಯೇಟ್‌ ಎಡಿಟರ್‌ ನೌಶಾದ್‌ ಬಿಜಾಪುರೆ, ಸಂಯುಕ್ತ ಕರ್ನಾಟಕದ ಮುಖ್ಯ ವರದಿಗಾರ ವಿಲಾಸ್‌ ಜೋಶಿ, ಕನ್ನಡಪ್ರಭದ ಪ್ರಧಾನ ವರದಿಗಾರ ಶ್ರೀಶೈಲ ಮಠದ, ನ್ಯೂಸ್‌ ಫಸ್ಟ್‌ ಜಿಲ್ಲಾ ವರದಿಗಾರ ಶ್ರೀಕಾಂತ ಕುಬಕಡ್ಡಿ, ತರುಣ ಭಾರತ ಪತ್ರಿಕೆಯ ಹಿರಿಯ ವರದಿಗಾರ ರಮೇಶ ಹಿರೇಮಠ, ವೇಣುಧ್ವನಿ ರೇಡಿಯೋ ಕಾರ್ಯಕ್ರಮದ ಸಂಯೋಜಕ ಮಂಜುನಾಥ ಬಳ್ಳಾರಿಯವರಿಗೆ ವಿಶೇಷ ಗೌರವ ಪ್ರದಾನ ನಡೆಯಲಿದೆ ಎಂದು ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಪತಕುಮಾರ ಮುಚಳಂಬಿ ಹಾಗೂ ದಿನಪತ್ರಿಕೆಗಳ ಸಂಪಾದಕರ ಸಂಘದ ಜಿಲ್ಲಾ ಉಪಾಧ್ಯಕ್ಷ ಹಿರೋಜಿ ಮಾವರಕರ ಹಾಗೂ ಕರ್ನಾಟಕ ಜರ್ನಲಿಸ್ಟ್ಸ್ ಯೂನಿಯನ್ (ರಿ) ಟ್ರಸ್ಟ್‌ನ ಕಾರ್ಯದರ್ಶಿ ವಸಂತ ಹೊಸಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!