This is the title of the web page
This is the title of the web page

Please assign a menu to the primary menu location under menu

State

ಅರ್ಜಿ ಆಹ್ವಾನ


ಗದಗ ಸೆಪ್ಟೆಂಬರ್ ೧೨: ಪ್ರಸ್ತುತ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಂದು ಪರಿಶಿಷ್ಟ ವರ್ಗದ ಜನಾಂಗದ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ನೀಡಿ ಗೌರವಿಸಲು ಸರ್ಕಾರ ನಿರ್ಧರಿಸಿದೆ. ಅಕ್ಟೋಬರ ೨೮ ರಂದು ನಡೆಯುವ ಮಹರ್ಷಿ ವಾಲ್ಮೀಕಿ ಜಯಂತಿಯಂದು ಪ್ರಶಸ್ತಿಯನ್ನು ನೀಡಲು ಗದಗ ಜಿಲ್ಲೆಯ ವ್ಯಾಪ್ತಿಯಲ್ಲಿ ಪ್ರಶಸ್ತಿಗೆ ಅರ್ಹ ವ್ಯಕ್ತಿಗಳನ್ನು ಆಯ್ಕೆ ಮಾಡಬೇಕಾಗಿದ್ದರಿಂದ ಸಮಾಜ ಸೇವೆ ಕೈಗೊಂಡ ಹಾಗೂ ಪರಿಶಿಷ್ಟ ಪಂಗಡದ ಜನಾಂಗದ ಏಳಿಗೆಗಾಗಿ ಶ್ರಮಿಸಿದ ಬಗ್ಗೆ ಛಾಯಾಚಿತ್ರ ಹಾಗೂ ದಾಖಲೆ ಸಮೇತವಾಗಿ ಅರ್ಜಿಯನ್ನು ಉಪನಿರ್ದೇಶಕರ ಕಛೇರಿ ಸಮಾಜ ಕಲ್ಯಾಣ ಇಲಾಖೆ ರೂ ನಂ: ೧೦೭ ಮೊದಲನೆ ಮಹಡಿ ಜಿಲ್ಲಾಡಳಿತ ಭವನ ಹುಬ್ಬಳ್ಳಿ ರೋಡ್ ಗದಗ ಕಚೇರಿಗೆ ಸೆಪ್ಟಂಬರ ೨೫ ರೊಳಗಾಗಿ ಖುದ್ದಾಗಿ ಸಲ್ಲಿಸಲು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ,ಗದಗ ದೂರವಾಣೀ ಸಂಖ್ಯೆ ೦೮೩೭೨-೨೩೧೮೨೮ ಸಂಪರ್ಕಿಸಬಹುದಾಗಿದೆ.


Leave a Reply