This is the title of the web page
This is the title of the web page

Please assign a menu to the primary menu location under menu

State

ವಿಕಲಚೇತನರಿಗೆ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ


ಕೊಪ್ಪಳ ಸೆಪ್ಟೆಂಬರ್ ೧೨ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ೨೦೨೩-೨೪ನೇ ಸಾಲಿಗೆ ಇಲಾಖೆಯಿಂದ ಟಾಕಿಂಗ್ ಲ್ಯಾಪ್‌ಟಾಪ್, ಬ್ರೆöÊಲ್‌ಕಿಟ್, ಹೊಲಿಗೆಯಂತ್ರ, ಸಾಧನ ಸಲಕರಣೆ ಹಾಗೂ ಶುಲ್ಕ ಮರುಪಾವತಿ ಯೋಜನೆಗೆ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.
ಎಸ್.ಎಸ್.ಎಲ್.ಸಿ ಹಾಗೂ ನಂತರದ ತರಗತಿಗಳಲ್ಲಿ ಓದುತ್ತಿರುವ ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್ ಮತ್ತು ಬ್ರೆöÊಲ್‌ಕಿಟ್, ಶ್ರವಣದೋಷವುಳ್ಳ ವಿಕಲಚೇತನರಿಗೆ ಹೊಲಿಗೆಯಂತ್ರ, ಎಸ್.ಎಸ್.ಎಲ್.ಸಿ ನಂತರದ ಉನ್ನತ ವ್ಯಾಸಂಗ ಮಾಡುತ್ತಿರುವ ವಿಕಲಚೇತನರಿಗೆ ಶುಲ್ಕ ಮರುಪಾವತಿ ಹಾಗೂ ವಿಕಲಚೇತನರಿಗೆ ವಿವಿಧ ರೀತಿಯ ಸಾಧನ ಸಲಕರಣೆಗಳಿಗೆ ಸೌಲಭ್ಯ ಒದಗಿಸಲಾಗುತ್ತಿದೆ.
ಆಸಕ್ತರ ಅರ್ಹ ವಿಕಲಚೇತನ ಅಭ್ಯರ್ಥಿಗಳು ಅರ್ಜಿಯನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ನಗರಾಭಿವೃದ್ಧಿ ಪ್ರಾಧಿಕಾರ ಕಾರ್ಯಾಲಯ ಆವರಣ ಕೊಠಡಿ ಸಂಖ್ಯೆ ೩೧,೩೨ ರಿಲಾಯನ್ಸ್ ಪೆಟ್ರೋಲ್ ಬಂಕ್ ಎದುರುಗಡೆ ಹೊಸಪೇಟೆ ರಸ್ತೆ ಕೊಪ್ಪಳ ಇವರಿಗೆ ಸೆಪ್ಟೆಂಬರ್ ೨೨ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೊನೆಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ತಾಲೂಕು ಎಂ.ಆರ್.ಡಬ್ಲೂö್ಯ.ಗಳಾದ ಕೊಪ್ಪಳದ ಜಯಶ್ರೀ ಮೊ.ಸಂ: ೯೯೮೦೧೨೬೩೯೧, ಯಲಬುರ್ಗಾದ ಬಸನಗೌಡ ಮೊ.ಸಂ: ೯೯೬೪೮೦೩೦೪೭, ಕುಷ್ಟಗಿಯ ಚಂದ್ರಶೇಕರ ಮೊ.ಸಂ: ೯೯೧೬೩೦೮೫೮೫, ಗಂಗಾವತಿಯ ಮಂಜುಳಾ ಮೊ.ಸಂ: ೭೯೭೫೩೯೮೨೦೨ ಹಾಗೂ ವಿಕಲಚೇತನರ ಮಾಹಿತಿ ಸಲಹಾ ಕೇಂದ್ರದ ದೂರವಾಣಿ ಸಂಖ್ಯೆ ೦೮೫೩೯-೨೦೦೪೬೦ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕ¯ರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply