ಗದಗ ಎಪ್ರಿಲ್ ೧: ಗದಗ ಬೆಟಗೇರಿ ನಗರಸಭೆ ವ್ಯಾಪ್ತಿಯ ಯಾವತ್ತೂ ಖಸಾಯಿಖಾನೆಗಳಲ್ಲಿ ಪ್ರಾಣಿವಧೆ ಮಾಡುವ ಹಾಗೂ ಮಾಂಸಮಾರಾಟಗಾರರಿಗೆ ತಿಳಿಯಪಡಿಸುವುದೇನೆಂದರೆ ಮಹಾವೀರ ಜಯಂತಿ ಅಂಗವಾಗಿ ಎಪ್ರಿಲ್ ೪ ರಂದು ಜಾನುವಾರುಗಳ ವಧೆ ಹಾಗೂ ಮಾಂಸಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಮಾಂಸಮಾರಾಟ ಮಾಡುವದಾಗಲಿ ಹಾಗೂ ಜಾನುವಾರುಗಳನ್ನು ವಧೆ ಮಾಡದಿರಲು ಸೂಚಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಅಂಥವರ ಲೈಸನ್ಸನ್ನು ರದ್ದು ಮಾಡಲಾಗುವುದು ಎಂದು ಗದಗ ಬೆಟಗೇರಿ ನಗರ ಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ಖಸಾಯಿಖಾನೆ ಮತ್ತು ಮಾಂಸ ಮಾರಾಟ ಬಂದ