This is the title of the web page
This is the title of the web page

Please assign a menu to the primary menu location under menu

State

ಮತದಾನ ಪ್ರಮಾಣ ಹೆಚ್ಚಾಗಲಿ: ಸಿಇಓ ರಾಹುಲ್ ಪಾಂಡೆ


ಕೊಪ್ಪಳ ಮೇ ೦೯ :ಮತದಾನದ ಹಕ್ಕು ಮತ್ತು ಎಲ್ಲಕ್ಕಿಂತ ಮುಖ್ಯವಾಗಿ ಅರ್ಹ ಪ್ರಜೆಗಳು ತಮ್ಮ ಮತ ಹಕ್ಕನ್ನು ಚಲಾಯಿಸುವುದು ಪ್ರಜಾಪ್ರಭುತ್ವದ ಬಹುಮುಖ್ಯ ಆಶಯವಾಗಿದೆ. ಜನರು ತಮ್ಮ ಮತ ಚಲಾಯಿಸುವ ಹಕ್ಕಿನ ಮೂಲಕ ಸಮರ್ಥ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಅವಕಾಶವಿರುತ್ತದೆ. ಈ ನಿಟ್ಟಿನಲ್ಲಿ ಕೊಪ್ಪಳ ಜಿಲ್ಲೆಯಲ್ಲಿನ ಸಾರ್ವಜನಿಕರು ಮೇ ೧೦ರಂದು ತಪ್ಪದೇ ಮತದಾನ ಮಾಡಬೇಕು. ಮತದಾನದ ಪ್ರಮಾಣ ಹೆಚ್ಚಾಗುವ ನಿಟ್ಟಿನಲ್ಲಿ ಮತದಾನ ಮಾಡುವ ಬದ್ಧತೆ ತೋರಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಕೊಪ್ಪಳ ಜಿಲ್ಲೆಯ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.


Leave a Reply