ಕೊಪ್ಪಳ:- ಏಪ್ರಿಲ್ 26 (ಕರ್ನಾಟಕ ವಾರ್ತೆ): ಕಾರಟಗಿ ತಾಲೂಕಿನ ಯರಡೋಣ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಿಂದಿಕ್ಯಾಂಪ್(ಐದನೇ ವಾರ್ಡ್) ನಲ್ಲಿ ಏಪ್ರಿಲ್ 25ರಂದು ತಾಲೂಕು ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡು ಗ್ರಾಮದ ನಿವಾಸಿಗಳಿಂದ ಅಣಕು ಮತದಾನ ಮಾಡಿಸಲಾಯಿತು.
ಈ ವೇಳೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ರಮೇಶ್ ತಿಮ್ಮಾರೆಡ್ಡಿ ಅವರು ಮಾತನಾಡಿ, ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಎಲ್ಲರೂ ಮತಗಟ್ಟೆಗೆ ತೆರಳಿ ಮತ ಚಲಾಯಿಸಿ, ಸಂವಿಧಾನಾತ್ಮಕವಾಗಿ ಮತ ಹಾಕುವುದು ನಮ್ಮ ಕರ್ತವ್ಯ, ಗ್ರಾಮದಲ್ಲಿನ ಪ್ರತಿಯೊಬ್ಬರೂ ಮತದಾನದಿಂದ ಯಾರು ಹೊರಗುಳಿಯಬಾರದು. ನಮ್ಮ ಗ್ರಾಮ ಪಂಚಾಯತಿಯ ಶೇ.100 ರಷ್ಟು ಮತದಾನವಾಗಲು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದರು.
ತಾ.ಪಂ ಐಇಸಿ ಸಂಯೋಜಕ ಸೋಮನಾಥ ನಾಯಕ ಅವರು ಇವಿಎಂ, ವಿವಿಪ್ಯಾಟ್ ಪ್ರಾತ್ಯಕ್ಷಿಕೆ ಕುರಿತು ಮಾಹಿತಿ ನೀಡಿ, ಕ್ಯಾಂಪ್ನ ನಿವಾಸಿಗಳಿಂದ ಅಣಕು ಮತದಾನ ಮಾಡಿಸಿದರು.
ಈ ಸಂದರ್ಭದಲ್ಲಿ ಗ್ರಾ.ಪಂ ಕಾರ್ಯದರ್ಶಿ ಹನುಮಂತಪ್ಪ, ಸಿಬ್ಬಂದಿಗಳಾದ ಗ್ಯಾನಪ್ಪ ಕುಂಟೋಜಿ, ಹುಸೇನಪ್ಪ, ರಾಮಲಿಂಗಪ್ಪ, ದುರಗಪ್ಪ ಸೇರಿದಂತೆ ಗ್ರಾಮಸ್ಥರು ಇದ್ದರು.
ಆರ್ ಶರಣಪ್ಪ ಗುಮಗೇರಾ
ಕೊಪ್ಪಳ