ಕೊಪ್ಪಳ ಏಪ್ರಿಲ್ ೨೬ : ಗಂಗಾವತಿ ತಾಲೂಕಿನ ಬಸಾಪಟ್ಟಣ ಗ್ರಾಮದಲ್ಲಿ ಏಪ್ರಿಲ್ ೨೫ರಂದು ಮತದಾನ ಜಾಗೃತಿ ಹಾಗೂ ವಿವಿಎಂ, ವಿವಿ ಪ್ಯಾಟ್ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಜರುಗಿತು.
ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ಲಿಂಗತ್ವ ಅಲ್ಪಸಂಖ್ಯಾತರಾದ ಶರಣಮ್ಮ ಅವರು ಅಣಕು ಮತದಾನ ಮಾಡುವ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿ, ನಮ್ಮ ಮತ ನಮ್ಮ ಹಕ್ಕಾಗಿದೆ. ನಮ್ಮ ಮತವನ್ನು ಮಾರಾಟ ಮಾಡಿಕೊಳ್ಳದೇ ನಾವು ಹಕ್ಕು ಚಲಾಯಿಸಬೇಕು. ಯಾವುದೇ ಆಸೆ, ಆಮೀಷಕ್ಕೆ ಒಳಗಾಗಬಾರದು. ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದರು.
ಸ್ವೀಪ್ ಸಂಕಲನ ವಿಷಯ ನಿರ್ವಾಹಕ ಜುಬೇರ್ ನಾಯ್ಕ್, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಇಂದಿರಾ ಅವರು ಮತದಾನ ಮಹತ್ವ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ತಾಲೂಕು ಐಇಸಿ ಸಂಯೋಜಕರು, ಗ್ರಾಪಂ ಕಾರ್ಯದರ್ಶಿಗಳು, ಎಲ್ಲಾ ಸಿಬ್ಬಂದಿಗಳು, ಎನ್.ಆರ್.ಎಲ್.ಎಂ ಸಂಜೀವಿನಿ ಯೋಜನೆ ಸ್ವಸಹಾಯ ಸಂಘದ ಮಹಿಳೆಯರು ಉಪಸ್ಥಿತರಿದ್ದರು.
Gadi Kannadiga > State > ಗಂಗಾವತಿ: ಅಣಕು ಮತದಾನಕ್ಕೆ ಲಿಂಗತ್ವ ಅಲ್ಪಸಂಖ್ಯಾತರಿಂದ ಚಾಲನೆ
ಗಂಗಾವತಿ: ಅಣಕು ಮತದಾನಕ್ಕೆ ಲಿಂಗತ್ವ ಅಲ್ಪಸಂಖ್ಯಾತರಿಂದ ಚಾಲನೆ
Suresh26/04/2023
posted on

More important news
ಪ್ರತಿಬಂಧಕಾಜ್ಞೆ ಜಾರಿ
08/06/2023