This is the title of the web page
This is the title of the web page

Please assign a menu to the primary menu location under menu

State

ಕೊಪ್ಪಳ ಜಿಲ್ಲೆಗೆ ಸಾಮಾನ್ಯ, ವೆಚ್ಚ, ಪೊಲೀಸ್ ವೀಕ್ಷಕರ ಆಗಮನ


ಕೊಪ್ಪಳ ಏಪ್ರಿಲ್ ೨೦ : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-೨೦೨೩ರ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಗೆ ಸಾಮಾನ್ಯ ವೀಕ್ಷಕರು, ಚುನಾವಣಾ ವೆಚ್ಚ ವೀಕ್ಷಕರು ಹಾಗೂ ಪೊಲೀಸ್ ವೀಕ್ಷಕರು ಆಗಮಿಸಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರು ತಿಳಿಸಿದ್ದಾರೆ.
ಸಾಮಾನ್ಯ ವೀಕ್ಷಕರಾಗಿ ಯಲಬುರ್ಗಾ ಮತ್ತು ಗಂಗಾವತಿ ವಿಧಾನಸಭಾ ಕ್ಷೇತ್ರಗಳಿಗೆ ವಿ.ಸಂಪತ್ ಐಎಎಸ್ ಮೊ.ಸಂ: ೯೩೮೦೨೫೧೬೩೮, ಕುಷ್ಟಗಿ ಮತ್ತು ಕನಕಗಿರಿ ವಿಧಾನಸಭಾ ಕ್ಷೇತ್ರಗಳಿಗೆ ಸ್ವಪ್ನಿಲ್ ಎಂ ನಾಯಕ ಐಎಎಸ್ ಮೊ.ಸಂ: ೯೩೮೦೨೯೪೨೭೫ ಹಾಗೂ ಕೊಪ್ಪಳ ವಿಧಾನಸಭಾ ಕ್ಷೇತ್ರಕ್ಕೆ ಭಾನಾ ಪ್ರಕಾಶ ಯಾತರಾ ಐಎಎಸ್ ಮೊ.ಸಂ: ೯೩೮೦೨೮೬೦೦೭ ಇವರು ಆಗಮಿಸಿದ್ದಾರೆ.
ಚುನಾವಣಾ ವೆಚ್ಚದ ವೀಕ್ಷಕರಾಗಿ ಕುಷ್ಟಗಿ ಮತ್ತು ಕನಕಗಿರಿ ವಿಧಾನಸಭಾ ಕ್ಷೇತ್ರಗಳಿಗೆ ಜಿ.ವಿವೇಕಾನಂದ ಐಆರ್‌ಎಸ್ ಮೊ.ಸಂ: ೯೧೧೩೦೨೬೩೮೦, ಯಲಬುರ್ಗಾ ಮತ್ತು ಕೊಪ್ಪಳ ವಿಧಾನಸಭಾ ಕ್ಷೇತ್ರಗಳಿಗೆ ಎಸ್.ಆರ್.ನೆಡುಮಾರನ್ ಐಆರ್‌ಎಸ್ ಮೊ.ಸಂ: ೯೧೧೩೦೨೨೬೮೯ ಹಾಗೂ ಗಂಗಾವತಿ ವಿಧಾನಸಭಾ ಕ್ಷೇತ್ರಕ್ಕೆ ಡಾ ಎ.ವೆಂಕಟೇಶ ಬಾಬಾ ಐಆರ್‌ಎಸ್ ಮೊ.ಸಂ: ೯೧೧೩೦೦೫೨೧೦ ಆಗಮಿಸಿದ್ದಾರೆ.ಅದೇ ರೀತಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮನೋಜ್ ತಿವಾರಿ ಐಪಿಎಸ್ ಅವರು ಪೊಲೀಸ್ ವೀಕ್ಷಕರಾಗಿ ಆಗಮಿಸಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ದೂರುಗಳಿದ್ದಲ್ಲಿ ಸಾರ್ವಜನಿಕರು ಇವರಿಗೆ ದೂರವಾಣಿ ಮೂಲಕ ಕರೆ ಮಾಡಿ ತಿಳಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.


Leave a Reply