This is the title of the web page
This is the title of the web page

Please assign a menu to the primary menu location under menu

State

ಅಗಸ್ಟ ೮ ರಂದು ಗೃಹ ಜ್ಯೋತಿ ಯೋಜನೆಗೆ ಚಾಲನೆ


ಗದಗ ಅಗಸ್ಟ ೫: ರಾಜ್ಯ ಸರ್ಕಾರದ ಇಂಧನ ಇಲಾಖೆಯಿಂದ ಗೃಹಜ್ಯೋತಿ ಯೋಜನೆಗೆ ಚಾಲನೆ ದೊರೆಯಲಿದ್ದು ಕಾರ್ಯಕ್ರಮವು ಅಗಸ್ಟ ೮ ರಂದು ಬೆ ೧೧.೩೦ ಗಂಟೆಗೆ ನಗರದ ಹುಬ್ಬಳ್ಳಿ ರಸ್ತೆಯಲ್ಲಿನ ಪರಿಸರ ಲೇಔಟದ ಭಾರತ ರತ್ನ ಪಂ. ಭೀಮಸೇನ ಜೋಶಿ ರಂಗಮಂದಿರದಲ್ಲಿ ಜರುಗಲಿದೆ. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮತ್ತು ಇಂಧನ ಸಚಿವ ಕೆ.ಜೆ. ಜಾರ್ಜ ಘನ ಉಪಸ್ಥಿತಿ ವಹಿಸುವರು. ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ, ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಕಾರ್ಯಕ್ರಮ ಉದ್ಘಾಟಿಸುವರು.ಮುಖ್ಯ ಅತಿಥಿಗಳಾಗಿ ಸರ್ಕಾರಿ ಮುಖ್ಯ ಸಚೇತಕರು ಹಾಗೂ ಶಾಸಕ ಸಲೀಂ ಅಹ್ಮದ್,ಸಂಸದರುಗಳಾದ ಶಿವಕುಮಾರ ಉದಾಸಿ, ಪಿ.ಸಿ.ಗದ್ದಿಗೌಡರ, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ವಿ.ಸಂಕನೂರ, ಪ್ರದೀಪ ಶೆಟ್ಟರ್, ನರಗುಂದ ಶಾಸಕ ಸಿ.ಸಿ.ಪಾಟೀಲ,ರೋಣ ಶಾಸಕ ಜಿ.ಎಸ್.ಪಾಟೀಲ, ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ, ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷೆ ಶ್ರೀಮತಿ ಉಷಾ ದಾಸರ, ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಆಗಮಿಸಲಿದ್ದಾರೆ.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ವಾಣಿಜ್ಯ ತೆರಿಗೆ ಇಲಾಖೆಯ ಆಯುಕ್ತರಾದ ಶ್ರೀಮತಿ ಸಿ ಶಿಖಾ, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಬಿ.ಎಸ್.ನೇಮಗೌಡ ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ.


Leave a Reply