ಕೊಪ್ಪಳ ಮೇ ೨೪ : ಮಾವು ಮಾಗಿಸಲು ಕ್ಯಾಲ್ಸಿಯಂ ಕಾರ್ಬೈಡ್ ಬಳಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆ ಅಂಕಿತ ಅಧಿಕಾರಿಗಳಾದ ಡಾ ಟಿ.ಲಿಂಗರಾಜು ಅವರು ತಿಳಿಸಿದ್ದಾರೆ.
ಮಾವಿನ ಹಣ್ಣುಗಳನ್ನು ಕೃತಕವಾಗಿ ಮಾಗಿಸಲು ಕ್ಯಾಲ್ಸಿಯಂ ಕಾರ್ಬೈಡನ್ನು ಬಳಸುವುದು ಎಫ್.ಎಸ್.ಎಸ್.ಎ ಕಾಯ್ದೆ ಅನ್ವಯ ದಂಡನೀಯ ಅಪರಾಧವಾಗಿದೆ. ಕ್ಯಾಲ್ಸಿಯಂ ಕಾರ್ಬೈಡ್ ನಿಂದಾಗಿ ಉಸಿರಾಟದ ತೊಂದರೆಗಳು, ಚರ್ಮ ಕಾಯಿಲೆಗಳು ಮತ್ತು ಕ್ಯಾನ್ಸರ್ ಆಗುವ ಸಾಧ್ಯತೆ ಇರುತ್ತದೆ. ಎಫ್.ಎಸ್.ಎಸ್.ಎ ಕಾಯ್ದೆ ಮಾರಾಟದ ಮೇಲಿನ ನಿಷೇಧ ಮತ್ತು ನಿರ್ಬಂಧಗಳು (ಠಿಡಿohibiಣioಟಿ ಚಿಟಿಜ ಡಿesಣಡಿiಛಿಣioಟಿs oಟಿ sಚಿಟe) ರೆಗ್ಯೂಲೇಷನ್ ಸಂಖ್ಯೆ ೨,೩,೫ ಪ್ರಕಾರ ಕಾರ್ಬೈಡ್ ಗ್ಯಾಸ್ ಕೃತಕವಾಗಿ ಹಣ್ಣು ಮಾಡಲು ನಿಷೇಧಿಸಿದೆ. ಆಹಾರ ಸುರಕ್ಷತಾ ಕಾಯ್ದೆ ಕಲಂ ೫೮ರ ಪ್ರಕಾರ ರೂ.೨ ಲಕ್ಷದವರೆಗೂ ದಂಡ ವಿಧಿಸಬಹುದಾಗಿದೆ.
ಗ್ರಾಹಕರು ಮಾವಿನ ಹಣ್ಣುಗಳನ್ನು ಖರೀದಿಸುವ ಸಂದರ್ಭದಲ್ಲಿ ಕ್ಯಾಲ್ಸಿಯಂ ಕಾರ್ಬೈಡ್ ಪೊಟ್ಟಣಗಳನ್ನು ಇಟ್ಟು ಕೃತಕವಾಗಿ ಹಣ್ಣುಗಳು ಮಾಗಿಸುವುದು ಕಂಡುಬಂದಲ್ಲಿ ಅಂಕಿತ ಅಧಿಕಾರಿಗಳು, ಎಫ್.ಎಸ್.ಎಸ್.ಎ ಕಚೇರಿ, ಹಳೆ ಜಿಲ್ಲಾ ಆಸ್ಪತ್ರೆ ಆವರಣ, ಅಶೋಕ ವೃತ್ತದ ಹತ್ತಿರ, ಕೊಪ್ಪಳ ಇವರ ಗಮನಕ್ಕೆ ತರುವಂತೆ ಪ್ರಕಟಣೆ ತಿಳಿಸಿದೆ.
Gadi Kannadiga > State > ಮಾವು ಮಾಗಿಸಲು ಕ್ಯಾಲ್ಸಿಯಂ ಕಾರ್ಬೈಡ್ ಬಳಸಿದರೆ ಕಠಿಣ ಕ್ರಮ
ಮಾವು ಮಾಗಿಸಲು ಕ್ಯಾಲ್ಸಿಯಂ ಕಾರ್ಬೈಡ್ ಬಳಸಿದರೆ ಕಠಿಣ ಕ್ರಮ
Suresh24/05/2023
posted on
More important news
ಯಮನಪ್ಪ ಧರನಾಯಕ್ ನಿಧನ
02/06/2023
ವ್ಯಕ್ತಿ ಮೃತ: ವಾರಸುದಾರರ ಪತ್ತೆಗಾಗಿ ಮನವಿ
31/05/2023
ಮಹಿಳೆ ಮೃತ: ವಾರಸುದಾರರ ಪತ್ತೆಗಾಗಿ ಮನವಿ
31/05/2023
ವ್ಯಕ್ತಿ ಮೃತ: ವಾರಸುದಾರರ ಪತ್ತೆಗಾಗಿ ಮನವಿ
31/05/2023
ಮಹಿಳೆ ಮೃತ: ವಾರಸುದಾರರ ಪತ್ತೆಗಾಗಿ ಮನವಿ
31/05/2023
ಮಂಗಳೂರು: ಐಟಿಐ ಪ್ರವೇಶಕ್ಕೆ ಅರ್ಜಿ ಆಹ್ವಾನ
31/05/2023