This is the title of the web page
This is the title of the web page

Please assign a menu to the primary menu location under menu

State

ಬಡಜನರಿಗೂ ಯೋಜನೆಯ ಲಾಭ ದೊರಕಲಿ ಕಾಯಕ ಬಂಧುಗಳ ತರಬೇತಿ ಕಾರ್ಯಾಗಾರದಲ್ಲಿ ಕಿಶನ ಕಲಾಲ ಅಭಿಮತ


ಗಜೇಂದ್ರಗಡ: ನರೇಗಾ ಯೋಜನೆಯಡಿ ಸಮರ್ಪಕವಾಗಿ ಕಾರ್ಯರೂಪಕ್ಕೆ ತಂದು, ಗ್ರಾಮೀಣ ಪ್ರದೇಶಗಳ ಕಡುಬಡವರಿಗೂ ಯೋಜನೆಯ ದೊರಕು ವಂತ್ತಾಗಬೇಕು ಎಂದು ಗಜೇಂದ್ರಗಡ ತಾಲೂಕು ಪಂಚಾಯತ ಕಾರ್ಯ £ರ್ವಹಕಾಧಿಕಾರಿ ಕಿಶನ ಕಲಾಲ ಹೇಳಿದರು.
ಪಟ್ಟಣದ ತಾಲೂಕು ಪಂಚಾಯತ ಸಭಾಭವನದಲ್ಲಿ ಬುಧವಾರ ನಡೆದ ಬಿಎಫ್ಟಿ, ಕಾಯಕ ಮಿತ್ರ ಹಾಗೂ ಕಾಯಕಬಂಧುಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದರು.ಇದೇ ಎಪ್ರೀಲ್ ೦೧ ರಿಂದ ತಾಲೂಕಿನ ಎಲ್ಲ ಗ್ರಾಮ ಪಂಚಾಯತಗಳಲ್ಲಿ ನರೇಗಾ ಕೆಲಸ ಆರಂಭವಾಗಲಿದ್ದು, ನರೇಗಾ ಕೆಲಸಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೂಲಿಕಾರರನ್ನು ಸೇರಿಸುವ ಕೆಲಸವಾಗಬೇಕೆಂದು ತರಬೇತಿಯಲ್ಲಿ ಭಾಗವಹಿಸಿದ್ದ ಕಾಯಕಬಂಧುಗಳಿಗೆ ಕಿವಿಮಾತು ಹೇಳಿದರು.
ಸಹಾಯಕ £ರ್ದೇಶಕ ಬಸವರಾಜ ಬಡಿಗೇರ್ ಮಾತನಾಡಿ, ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ನರೇಗಾ ಯೋಜನೆ ಮಹತ್ವದ ಪಾತ್ರವಹಿಸಿದೆ. ಯೋಜನೆಯಡಿ ವಾರ್ಷಿಕವಾಗಿ ೧೦೦ ದಿನಗಳವರೆಗೆ ಗ್ರಾಮೀಣ ಪ್ರದೇಶದ ಕೂಲಿಕಾರರಿಗೆ ಕೆಲಸ ಸಿಗುವಂತ್ತಾಗವೇಕು. ಈ ಮೂಲಕ ಗ್ರಾಮೀಣ ಪ್ರದೇಶದ ಮೂಲಭೂತ ಸಮಸ್ಯೆಗಳನ್ನು £ವಾರಿಸಲು ನರೇಗಾ ವರದಾನವಾಗಲಿದೆ ಎಂದರು.
ನರೇಗಾ ಸಹಾಯಕ £ರ್ದೇಶಕ ವಾಸುದೇವ ಪೂಜಾರ ಮಾತನಾಡಿ, ನರೇಗಾ ಕೂಲಿಕಾರರಿಗೆ ದಿನವೊಂದಕ್ಕೆ ಕೂಲಿ ಮೊತ್ತವನ್ನು ೩೧೬ ರೂಪಾಯಿಗೆ ಹೆಚ್ಚಿಸಲಾಗಿದೆ. ಬೇಸಿಗೆ ಅವಧಿಯ ೬೦ ದಿನಗಳ ಕಾಲ ನರೇಗಾ ಯೋಜನೆಯಡಿ ಕೆಲಸ ಮಾಡಿದ್ರೆ ಕೂಲಿಕಾರರಿಗೆ ೧೮೯೬೦ ರೂಪಾಯಿ ಸಿಗುತ್ತದೆ. ಕೂಲಿಕಾರರು ನರೇಗಾ ಯೋಜನೆಯಿಂದ ಬರುವ ಈ ಹಣವನ್ನು ಮುಂಗಾರಿನ ಕೃಷಿ ಭಿತ್ತನೆಯ ಕಾರ್ಯಕ್ಕೆ ಸದೂಪಯೋಗ ಪಡಿಸಿಕೊಳ್ಳಲು ನೆರವಾಗುವುದು ಎಂದು ಅಭಿಪ್ರಾಯಪಟ್ಟರು.
ಕಾರ್ಯಾಗಾರದಲ್ಲಿ ತಾಲೂಕು ಸಮಾಜಿಕ ಲೆಕ್ಕ ಪರಿಶೋಧನೆ ಸಂಯೋಜಕ ವಿಜಯಮಹಾಂತೇಶ ಹಿರೇಮಠ ನರೇಗಾ ಯೋಜನೆಯ ಕುರಿತು ತರಬೇತಿ £Ãಡಿದರು.
ಮಾಹಿತಿ ಮತ್ತು ಶಿಕ್ಷಣ ಸಂಯೋಜಕರಾದ ಮಂಜುನಾಥ ಹಳ್ಳದ ಮಾತನಾಡಿ, ಕಾಯಕ ಬಂಧುಗಳು ಎಂದರೇ ಯಾರು? ಕಾಯಕ ಬಂಧುಗಳ ಪಾತ್ರ ಮತ್ತು ಜವಾಬ್ದಾರಿ ಕುರಿತು ತರಬೇತಿ £Ãಡಿದರು. ಕಂದಕಬಧುಗಳ £ರ್ಮಾಣ ಮತ್ತು ಅನುಷ್ಟಾನ ಕುರಿತು ತಾಂತ್ರಿಕ ಸಂಯೋಜಕ ಪ್ರಿಯಾಂಕ ಅಂಗಡಿ, ತಾಂತ್ರಿಕ ಸಹಾಯಕ ಸಿದ್ದು ಗುಡಿಮ£ ವಿಷಯ ಮಂಡಿಸಿದರು.
ತರಬೇತಿ ಕಾರ್ಯಾಗಾರದಲ್ಲಿ ಬಿಎಫ್ಟಿ, ಕಾಯಕ ಮಿತ್ರರು, ಕಾಯಕ ಬಂಧುಗಳು ಹಾಗೂ ನರೇಗಾ ಸಿಬ್ಬಂದಿ ವರ್ಗ, ತಾಲೂಕು ಪಂಚಾಯತ್ ಸಿಬ್ಬಂದಿಗಳು ಹಾಜರಿದ್ದರು. ಕಾರ್ಯಾಗಾರವನ್ನು ಗ್ರಾಮ ಕಾಯಕ ಮಿತ್ರ ತನುಜಾ ಮ್ಯಾಗೇರಿ £ರೂಪಿಸಿದರು.


Leave a Reply