WhatsApp Group
Join Now
ಕೊಪ್ಪಳ : ರೈಲ್ವೆ ನಿಲ್ದಾಣದ ಮೂಲಕ ಬೆಂಗಳೂರು ಸೇರಿದಂತೆ ವಿವಿಧ ಮಾರ್ಗಗಳಿಗೆ ಹೆಚ್ಚುವರಿ ಹೊಸ ರೈಲುಗಳನ್ನು ಪ್ರಾರಂಭಿಸುವುದು ಮತ್ತು ಕೆಲ ರೈಲುಗಳು ವಿಸ್ತರಿಸುವುದು ಹಾಗೂ ಇತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹುಬ್ಬಳ್ಳಿಯ ರೈಲ್ ಸೌಧದಲ್ಲಿ ಕಾರ್ಯದರ್ಶಿ ಸುನಿಲ್ ಜಿ, ಅವರ ಮೂಲಕ ನೈರುತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕ ಮುಕುಲ್ ಸರನ್ ಮಾಥೂರ್ ಅವರಿಗೆ ರೈಲ್ವೆ ಜನಪರ ಹೋರಾಟ ಸಮಿತಿಯಿಂದ ಮನವಿ ಸಲ್ಲಿಸಲಾಯಿತು.
ರೈಲ್ವೆ ಜನಪರ ಹೋರಾಟ ಸಮಿತಿಯ ಅಧ್ಯಕ್ಷ ಎಸ್.ಎ.ಗಫಾರ್. ಗೌರವ ಅಧ್ಯಕ್ಷ ಹಾಗೂ ಬಂಡಾಯ ಸಾಹಿತಿ ಅಲ್ಲಮ ಪ್ರಭು ಬೆಟ್ಟದೂರು, ಉಪಾಧ್ಯಕ್ಷ ಹನುಮೇಶ್ ಗುಂಡೂರು ವಕೀಲರು. ಕಾರ್ಯದರ್ಶಿ ಮಖಬೂಲ್ ರಾಯಚೂರು,ಸಹ ಕಾರ್ಯದರ್ಶಿ ಶಿವಪ್ಪ ಹಡಪದ್ ಮುಂತಾದವರು ಭಾಗವಹಿಸಿ ಸಲ್ಲಿಸಿದ ಮನವಿಯಲ್ಲಿ ಸಂಖ್ಯೆ : 56519/56520 ಬೆಂಗಳೂರು ಹೊಸಪೇಟೆ ಬೆಂಗಳೂರು ಈ ರೈಲನ್ನು ಹೊಸಪೇಟೆಯಿಂದ ಮುನಿರಾಬಾದ್ ಗಿಣಿಗೇರಾ ಕೊಪ್ಪಳ ಭಾಣಾಪುರ ತಳಕಲ್ ಜಂಕ್ಷನ್ ಮೂಲಕ ಕುಕನೂರು ಯಲಬುರ್ಗಾ ಕುಷ್ಟಗಿವರೆಗೆ ವಿಸ್ತರಿಸಬೇಕು.ಹುಬ್ಬಳ್ಳಿಯಿಂದ ಬೀದರಿಗೆ ಇಂಟರ್ ಸಿಟಿ ರೈಲು { ವಾಯ :ಗದಗ. ಕೊಪ್ಪಳ. ಹೊಸಪೇಟೆ , ಬಳ್ಳಾರಿ. ಗುಂತಕಲ್.ಮಂತ್ರಾಲಯ ರೋಡ್. ರಾಯಚೂರು. ಯಾದಗಿರಿ. ಕಲಬುರ್ಗಿ}. ಮಾರ್ಗವಾಗಿ ನಿತ್ಯ ಬೀದರಿಗೆ ಹೊಸ ರೈಲು ಪ್ರಾರಂಭಿಸುವುದರಿಂದ ಮುಂಬೈ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸಿದಂತಾಗುತ್ತದೆ.ನಿತ್ಯ ಬೆಳಿಗ್ಗೆ 8.30 ಕ್ಕೆ ಬಳ್ಳಾರಿಯಿಂದ ಹುಬ್ಬಳ್ಳಿಗೆ. ಮಧ್ಯಾಹ್ನ 2:30ಕ್ಕೆ ಹುಬ್ಬಳ್ಳಿಯಿಂದ ಬಳ್ಳಾರಿಗೆ ಹೊಸದಾಗಿ ಡೆಮೋ ಪ್ಯಾಸೆಂಜರ್ ರೈಲನ್ನು ಪ್ರಾರಂಭಿಸಬೇಕು.ಸಂಖ್ಯೆಃ 16545/16546 ಯಶವಂತಪುರದಿಂದ ಸಿಂಧನೂರು ಸಿಂಧನೂರುದಿಂದ ಯಶವಂತಪುರ. ಈ ರೈಲು ಗಿಣಿಗೇರಾ ರೈಲ್ವೆ ನಿಲ್ದಾಣದಿಂದ 10 ಕಿ.ಮೀ ಅಂತರದಲ್ಲಿರುವ ಜಿಲ್ಲಾ ಕೇಂದ್ರ ಕೊಪ್ಪಳ ರೈಲ್ವೆ ನಿಲ್ದಾಣಕ್ಕೆ ಬಂದು ಹೋಗಬೇಕು.2016ರಲ್ಲಿ {ಆಲಮಟ್ಟಿ. ಕೊಪ್ಪಳ. ಚಿತ್ರದುರ್ಗ.} ಈ ಹೊಸ ಮಾರ್ಗ ಸರ್ವೇ ಆಗಿದ್ದು, ಹೆಚ್ಚಿನ ಅನುದಾನ ಒದಗಿಸಿದರೆ. ಬಿಜಾಪುರದಿಂದ ಬೆಂಗಳೂರಿಗೆ ಮಧ್ಯ ಕರ್ನಾಟಕ ನೇರ ಸಂಪರ್ಕ ರೈಲ್ವೆ ಮಾರ್ಗ ವಾಗುತ್ತದೆ.ಈ ಮೊದಲಿದ್ದ ಸಂಖ್ಯೆ 0 7 3 3 5 / 0 7 3 3 6 ಬೆಳಗಾವಿಯಿಂದ ಮುನಗುರ ರೈಲನ್ನ ತಕ್ಷಣ ಪುನರಾರಂಭಿಸಬೇಕು ಮತ್ತು ಬಿಜಾಪುರ್ ದಿಂದ ತಿರುಪತಿಗೆ ಹೊಸ ರೈಲನ್ನು ಪ್ರಾರಂಭಿಸಬೇಕು.11415/ 11416 {ಸೋಲ್ಲಾಪುರ ಹೊಸಪೇಟೆ. ಸೋಲ್ಲಾಪುರ. }ಡೆಮೋ ಎಕ್ಸ್ ಪ್ರೆಸ್ ರೈಲು ಸಂಖ್ಯೆ 17329 / 17330{ಹುಬ್ಬಳ್ಳಿ.ವಿಜಯವಾಡ. ಹುಬ್ಬಳ್ಳಿ. } ಎಕ್ಸ್ ಪ್ರೆಸ್ ರೈಲು ಈ ಎರಡು ರೈಲುಗಳು ಕೋವಿಡ್ ಕಿಂತ ಮುಂಚೆ ಪ್ಯಾಸೆಂಜರ್ ರೈಲು ಆಗಿತ್ತು ಇದರಿಂದ ಸಾರ್ವಜನಿಕರಿಗೆ ತುಂಬಾ ಅನುಕೂಲವಾಗಿದ್ದನ್ನು ಬಳಿಕ ಎಕ್ಸ್ ಪ್ರೆಸ್ ಆಗಿದ್ದರಿಂದ ಜನರಿಗೆ ಮೂರು ಪಟ್ಟುಗಿಂತಲೂ ಹೆಚ್ಚು ದುಬಾರಿ ಬೆಲೆಗೆ ಟಿಕೆಟ್ ಖರೀದಿಸಿ ಪ್ರಯಾಣಿಸಬೇಕಾಗಿದೆ, ಇವುಗಳನ್ನು ತಕ್ಷಣ ಪ್ಯಾಸೆಂಜರ್ ರೈಲುಗಳಾಗಿ ಮೊದಲಿನ ದರದಲ್ಲಿ ಟಿಕೆಟ್ ಗಳನ್ನು ನಿಗದಿಪಡಿಸಬೇಕು. ಕೊಪ್ಪಳ ಹತ್ತಿರ ಗೇಟ್ ಸಂಖ್ಯೆ 66 ರ ಗೇಟ್ ಸಂಖ್ಯೆ 68ರ ನಡುವೆ ಸಿದ್ದೇಶ್ವರ ನಗರ, ಬೇಲ್ದಾರ್ ಕಾಲೋನಿ ಮತ್ತು ಹೊಸ ಲೇಔಟ್ ಗಳು ನಿರ್ಮಾಣಗೊಳ್ಳುತ್ತಿವೆ ಮುಖ್ಯ ರಸ್ತೆಯ ಎಂ.ಆರ್.ಎಫ್. ಟೈಯರ್ ಶೋರೂಮನ ಪಕ್ಕದ ರಸ್ತೆ ಮುಖಾಂತರ ಹೊಸ ಕೆಳ ಕಿರು ಸೇತುವೆ ನಿರ್ಮಿಸಬೇಕು.ಕೊಪ್ಪಳ ರೈಲ್ವೆ ನಿಲ್ದಾಣದಲ್ಲಿ ಟಿಕೆಟ್ ಮುಂಗಡ ಕಾಯ್ದಿರಿಸುವಿಕೆ ಸಮಯ ಹೆಚ್ಚಿಸಬೇಕು. ಮೊದಲಿನಂತೆ ಬೆಳಿಗ್ಗೆ ಎಂಟರಿಂದ ರಾತ್ರಿ ಎಂಟರವರೆಗೆ ಸಮಯ ವಿಸ್ತರಿಸಬೇಕು. ಅಗತ್ಯ ಇರುವ ಎರಡು ಸ್ವಿಫ್ಟ್ ಸಿಬ್ಬಂದಿಯನ್ನು ನೇಮಿಸಬೇಕು.ಕೊಪ್ಪಳ ರೈಲ್ವೆ ನಿಲ್ದಾಣದಲ್ಲಿ ಕುಡಿಯುವ ನೀರು ಯೋಗ್ಯ ಇಲ್ಲ, ಆದ್ದರಿಂದ ರೈಲ್ವೆ ನಿಲ್ದಾಣದ ವಸತಿ ಗೃಹಗಳಿಗೆ ಮತ್ತು ರೈಲ್ವೆ ನಿಲ್ದಾಣದಲ್ಲಿ ಕೊಪ್ಪಳ ನಗರಸಭೆಯಿಂದ ತುಂಗಭದ್ರಾ ನದಿಯ ಸಿಹಿ ಕುಡಿಯುವ ನೀರು ಒದಗಿಸಬೇಕು.ಹುಬ್ಬಳ್ಳಿ ಬೆಂಗಳೂರು ವಾಯ ಹಾವೇರಿ ಮೂಲಕ ನಿತ್ಯ ಸಂಚರಿಸುವ ಅನೇಕ ರೈಲುಗಳಲ್ಲಿ ನಾಲ್ಕು ರೈಲುಗಳನ್ನು ಹುಬ್ಬಳ್ಳಿ ವಯಾ ಕೊಪ್ಪಳ – ಹೊಸಪೇಟೆ ಮೂಲಕ ಬೆಂಗಳೂರಿಗೆ ಸಂಚರಿಸಲು ಕ್ರಮ ಕೈಗೊಳ್ಳಬೇಕು,ದುಡಿಯುವ ಜನರ ಅನುಕೂಲಕ್ಕಾಗಿ ಎಲ್ಲಾ ರೈಲುಗಳಲ್ಲೂ ಮುಂಭಾಗದಲ್ಲಿ ನಾಲ್ಕು ಸಾಮಾನ್ಯ ಬೋಗಿಗಳನ್ನು ಮತ್ತು ಹಿಂಭಾಗದಲ್ಲಿ ನಾಲ್ಕು ಸಾಮಾನ್ಯ ಬೋಗಿಗಳನ್ನು ಅಳವಡಿಸಬೇಕೆಂದು ಕೋರಲಾಗಿದೆ.