ಕೊಪ್ಪಳ ಜನವರಿ ೧೭ : ಕೊಪ್ಪಳ ಜಿಲ್ಲಾಡಳಿತದಿಂದ ಮಹಾಯೋಗಿ ವೇಮನ ಜಯಂತಿ ಆಚರಣೆ ಕಾರ್ಯಕ್ರಮವನ್ನು ಜನವರಿ ೧೯ ರಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಕಿನ್ನಾಳ ರಸ್ತೆಯ ಶ್ರೀ ಹೇಮರೆಡ್ಡಿ ಮಲ್ಲಮ ದೇವಸ್ಥಾನದಲ್ಲಿ ಆಯೋಜಿಸಲಾಗಿದೆ.
ರಾಜ್ಯ ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ್ ಸಿಂಗ್ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಹಾಲಪ್ಪ ಬಸಪ್ಪ ಆಚಾರ ಘನ ಉಪಸ್ಥಿತರಿರುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್ ಸಮಾರಂಭದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ಕರಡಿ ಸಂಗಣ್ಣ, ಶಾಸಕರುಗಳಾದ ಅಮರೇಗೌಡ ಎಲ್.ಪಾಟೀಲ್ ಬಯ್ಯಾಪೂರ, ಪರಣ್ಣ ಈಶ್ವರಪ್ಪ ಮುನವಳ್ಳಿ ಹಾಗೂ ಬಸವರಾಜ ದಢೇಸೂಗೂರು, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ್ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ನಗರಸಭೆ ಅಧ್ಯಕ್ಷರಾದ ಶಿವಗಂಗಾ ಶಿವರೆಡ್ಡಿ ಭೂಮಕ್ಕನವರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಹಾಂತೇಶ ಎಸ್ ಪಾಟೀಲ್ ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಟಿ.ಕೆ ಅನಿಲಕುಮಾರ್ ಭಾಗವಹಿಸುವರು. ಕಾರ್ಯಕ್ರಮದ ಅಂಗವಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರಾದ ಎಂ.ಎ ರಡ್ಡೇರ ಅವರು ಮಹಾಯೋಗಿ ವೇಮನರ ಕುರಿತು ವಿಶೇಷ ಉಪನ್ಯಾಸ ನೀಡುವರು. ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಿ.ಫೌಜಿಯಾ ತರನ್ನುಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅರುಣಾಂಗ್ಷು ಗಿರಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕೊಟ್ರೇಶ್ ಮರಬನಳ್ಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ಜ. ೧೯ ರಂದು ಕೊಪ್ಪಳದಲ್ಲಿ ಮಹಾಯೋಗಿ ವೇಮನ ಜಯಂತಿ
More important news
ವಿದ್ಯುತ್ ವ್ಯತ್ಯಯ
23/03/2023
ಚುನಾವಣೆಯಲ್ಲಿ ಮಕ್ಕಳ ಬಳಕೆ ಸಲ್ಲದು
23/03/2023
ಮಾರ್ಚ ೨೪ ರಂದು ನಗರಸಭೆಯಲ್ಲಿ ಸಾಮಾನ್ಯ ಸಭೆ
23/03/2023