This is the title of the web page
This is the title of the web page

Please assign a menu to the primary menu location under menu

State

ಮತದಾನ ಜಾಗೃತಿಗಾಗಿ ಮ್ಯಾರಥಾನ್ ರ‍್ಯಾಲಿ


ಗದಗ ಮಾರ್ಚ ೨೪: ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಭಾರತ ಚುನಾವಣಾ ಆಯೋಗ, ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಸ್ವೀಪ್ ಜಿಲ್ಲಾ ಸಮಿತಿ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಮತದಾನದ ಜಾಗೃತಿಗಾಗಿ ಮ್ಯಾರಥಾನ್ ರ‍್ಯಾಲಿ ಆಯೋಜಿಸಲಾಗಿತ್ತು. ಮ್ಯಾರಥಾನ್ ರ‍್ಯಾಲಿಯನ್ನು ಡಾ.ಸಂಜೀವ್ ಜೋಶಿ ಅವರು ಚಾಲನೆ ನೀಡಿ ಪ್ರಜಾಪ್ರಭುತ್ವದಲ್ಲಿ ಮತದಾನ ಮಾಡಲು ಎಲ್ಲರಿಗೂ ಹಕ್ಕು ನೀಡಲಾಗಿದೆ. ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ನಮ್ಮ ಹಕ್ಕು ಚಲಾಯಿಸಬೇಕು ಎಂದರು.
ಈ ಸಂದರ್ಭದಲ್ಲಿ ಕ್ರೀಡಾ ಇಲಾಖೆಯ ತರಬೇತುದಾರರಾದ ಮಂಜುನಾಥ ಭಾಗಡೆ ಸಿಬ್ಬಂದಿ ಹಾಗೂ ಕ್ರೀಡಾಪಟುಗಳು ಹಾಜರಿದ್ದರು. ಮ್ಯಾರಥಾನ್ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಭೀಷ್ಮ ಕೆರೆಯ ಬಸವೇಶ್ವರ ಮೂರ್ತಿ ಮುಂದೆ ತಲುಪಿತು.


Leave a Reply