This is the title of the web page
This is the title of the web page

Please assign a menu to the primary menu location under menu

State

ಮತದಾನ ಮಾಡುವುದಕ್ಕಾಗಿ ಅರ್ಹ ಕಾರ್ಮಿಕರಿಗೆ ವೇತನ ಸಹಿ ರಜೆ ನೀಡಲು ಸೂಚನೆ


ಕೊಪ್ಪಳ ಏಪ್ರಿಲ್ ೨೭ : ಭಾರತ ಚುನಾವಣಾ ಆಯೋಗವು ಮೇ.೧೦ರಂದು ಮತದಾನ ನಿಗದಿಪಡಿಸಿದೆ. ಈ ದಿನದಂದು ರಾಜ್ಯಾದ್ಯಂತ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ೧೯೫೧ರ ಪ್ರಜಾ ಪ್ರತಿನಿಧಿ ಕಾಯ್ದೆ ಸೆಕ್ಷನ್ ೧೩೫(ಬಿ) ರಡಿ ಹಾಗೂ ಕೈಗಾರಿಕಾ ಸಂಸ್ಥೆಗಳ (ರಾಷ್ಟ್ರೀಯ ಮತ್ತು ಹಬ್ಬದ ರಜೆಗಳು) ಕಾಯ್ದೆ-೧೯೬೩ ಕಲಂ ೩(ಎ) ರನ್ವಯ ಅರ್ಹ ಮತದಾರರಿಗೆ ವೇತನ ಸಹಿತ ರಜೆ ಘೋಷಿಸಿ ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಮಾಲೀಕರು/ ನಿಯೋಜಕರು ಅನುವು ಮಾಡಿ ಕೊಡಬೇಕಾಗಿರುತ್ತದೆ. ಆದ್ದರಿಂದ ಚುನಾವಣೆ ನಡೆಯುವ ಕ್ಷೇತ್ರಗಳ ವ್ಯಾಪ್ತಿಯ ಎಲ್ಲಾ ಕಾರ್ಖಾನೆಗಳು ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಸದರಿ ದಿನದಂದು ಕಾಯ್ದೆಯನ್ವಯ ಅರ್ಹ ಕಾರ್ಮಿಕರು ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ನೀಡುವಂತೆ ಈ ಮೂಲಕ ತಿಳಿಸಲಾಗಿದೆ. ತಪ್ಪಿದ್ದಲ್ಲಿ ಸಂಬಂಧಪಟ್ಟ ಸಂಸ್ಥೆ ನಿಯೋಜಕರ ವಿರುದ್ಧ ನಿಯಮಾನುಸಾರಿ ಕಾನೂನು ಕ್ರಮ ಜರುಗಿಸಲಾಗುವುದೆಂದು ಕೊಪ್ಪಳ ಉಪ ವಿಭಾಗದ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply