ಗಡಿ ಕನ್ನಡಿಗ ಸುದ್ದಿ
ಖಾನಾಪುರ:ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೌರ ಕಾರ್ಮಿಕರು ನಡೆಸುತ್ತಿರುವ ಮುಷ್ಕರದ ಹಿನ್ನಲೇ ಸ್ವಚ್ಚತಾ ಕಾರ್ಯ ಬಂದ ಮಾಡಿದ್ದು ಪಟ್ಟಣದಲ್ಲಿ ಸ್ವಚ್ಛತಾ ಕಾರ್ಯ ನಡೆಯದೆ ಬೀದಿಗಳು ಗಬ್ಬೆದ್ದು ನಾರುತ್ತಿವೆ.
ಇಲ್ಲಿನ ಪಟ್ಟಣ ಪಂಚಾಯತಿ ಮುಂದೆ ತಮಟೆಯೊಂದಿಗೆ ಪ್ರತಿಭಟನೆ ನಡೆಸಿ ಮಾತನಾಡಿದ ನೌಕರರ ಸಂಘದ ಅದ್ಯಕ್ಷ ಜಾಂಬೋಟಿ ಹೊರ ಗುತ್ತಿಗೆ ಪದ್ಧತಿ ನಿಲ್ಲಿಸಿ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸಬೇಕು. ನೀರು ಸರಬರಾಜುದಾರರು ಹಾಗೂ ವಾಹನ ಚಾಲಕರು ಜೀವನ ಭದ್ರತೆಯಿಲ್ಲದೆ ಅನೇಕ ವರ್ಷಗಳಿಂದಲೂ ಕೆಲಸ ಮಾಡುತ್ತಿದ್ದಾರೆ. ಅವರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು ಇನ್ನೆರಡು ದಿನದಲ್ಲಿ ನಮ್ಮ ಬೇಡಿಕೆ ಈಡೇರದಿದ್ದರೆ ನಗರದಾದ್ಯಂತ ನೀರು ಸರಬರಾಜು ನಿಲ್ಲಿಸಲಾಗುವದು ಎಂದು ಎಚ್ಚರಿಸಿದರು.
ಈ ವೇಳೆ ಮಾತನಾಡಿದ ಪಟ್ಟಣ ಪಂಚಾಯತ ಸದಸ್ಯೆ ಮೇಘಾ ಕುಂದರಗಿ ನಗರ ಸ್ವಚ್ಛವಾಗಿಡುವಲ್ಲಿ ಪೌರ ಕಾರ್ಮಿಕರ ಪಾತ್ರ ಮಹತ್ವದಾಗಿದೆ ಆದರೆ ಪೌರ ಕಾರ್ಮಿಕರ ವಿಷಯದಲ್ಲಿ ಸರ್ಕಾರ ವಹಿಸಿದ ನಿರ್ಲಕ್ಷ್ಯವನ್ನು ಇನ್ನು ಸಹಿಸಲಾಗದು’ ಇದರಿಂದ ಕಾರ್ಮಿಕರಿಗೆ ಅನ್ಯಯವಾಗುತ್ತಿದ್ದು ಸರಕಾರ ಈ ಕೂಡಲೇ ಇತ್ತ ಗಮನ ಹರಿಸಿ ಪೌರ ಕಾರ್ಮಿಕರ ಬೇಡಿಕೆಗಳ ಈಡೇರಿಕೆಯತ್ತ ಕ್ರಮ ಕೈಗೊಳ್ಳಬೇಕು ಇದಕ್ಕೆ ನಮ್ಮ ಪಟ್ಟಣ ಪಂಚಾಯತಿ ಸದಸ್ಯರ ಸಂಪೂರ್ಣ ಬೆಂಬಲವಿದೆ ಎಂದರು.
ಈ ಸಂದರ್ಭದಲ್ಲಿ ಅಧ್ಯಕ್ಷರು,ರಾಜೇಶ ಜಾಂಬೋಟಿ,ಉಪಾದ್ಯಕ್ಷರು ಅಲ್ತಾಪ್ ಮುಜಾವರ,ಕಾರ್ಯದರ್ಶಿ ಸಂಜೀವ ಕಾದ್ರೊಳ್ಳಿ,ಖಜಾಂಚಿ ಶೋಬಾ ಪತ್ತಾರ,ಹಾಗೂ ಸರ್ವ ಸಿಬ್ಬಂದಿಗಳು ಹಾಗೂ ಪೌರ ಕಾರ್ಮಿಕರು, ಪಟ್ಟಣ ಪಂಚಾಯತಿ ಸದಸ್ಯರು ಉಪಸ್ಥಿತರಿದ್ದರು.