ಕೊಪ್ಪಳ, ನವೆಂಬರ್ ೧೭ : ಕರ್ನಾಟಕ ಲೋಕಾಯುಕ್ತ, ಕೊಪ್ಪಳ ಕಛೇರಿಯಿಂದ ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ನಿರೀಕ್ಷಕರು ಮತ್ತು ಸಿಬ್ಬಂದಿಯೊಂದಿಗೆ ನವೆಂಬರ್ ೨೧ ಮತ್ತು ೨೨ ರಂದು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಸಾರ್ವಜನಿಕರಿಂದ ದೂರು/ಅಹವಾಲು ಸ್ವೀಕಾರ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ನವೆಂಬರ್ ೨೧ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಗಂಗಾವತಿಯ ಹೊಸ ಪ್ರವಾಸಿ ಮಂದಿರದಲ್ಲಿ ಹಾಗೂ ಯಲಬುರ್ಗಾದ ಹೊಸ ಸರ್ಕ್ಯೂಟ್ ಹೌಸ್ನಲ್ಲಿ, ಮಧ್ಯಾಹ್ನ ೦೨.೩೦ ಗಂಟೆಗೆ ಕಾರಟಗಿಯ ಪ್ರವಾಸಿ ಮಂದಿರದಲ್ಲಿ ಹಾಗೂ ಕುಕನೂರಿನ ಹೊಸ ಸರ್ಕ್ಯೂಟ್ ಹೌಸ್ನಲ್ಲಿ, ನವೆಂಬರ್ ೨೨ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಕುಷ್ಟಗಿಯ ಹಳೆ ಪ್ರವಾಸಿ ಮಂದಿರದಲ್ಲಿ ಹಾಗೂ ಕೊಪ್ಪಳದ ಪ್ರವಾಸಿ ಮಂದಿರದಲ್ಲಿ ಮತ್ತು ಮಧ್ಯಾಹ್ನ ೦೨.೩೦ ಗಂಟೆಗೆ ಕನಕಗಿರಿಯ ಪ್ರವಾಸಿ ಮಂದಿರದಲ್ಲಿ ಅಹವಾಲು ಸ್ವೀಕಾರ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಸಂಬಂಧಿಸಿದ ತಾಲ್ಲೂಕುಗಳ ಅಹವಾಲು ಸ್ವೀಕಾರ ಸಭೆಗೆ ಆಗಮಿಸಿ ತಮ್ಮ ಕುಂದು ಕೊರತೆಗಳ ದೂರುಗಳನ್ನು ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದು. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂ : ೦೮೫೩೯-೨೯೫೨೦೦ & ೨೨೦೫೩೩ ಗಳಿಗೆ ಸಂಪರ್ಕಿಸಬಹುದು ಎಂದು ಲೋಕಾಯುಕ್ತ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.
Gadi Kannadiga > State > ಕೊಪ್ಪಳ ಲೋಕಾಯುಕ್ತದಿಂದ ನ.೨೧ ಮತ್ತು ೨೨ ರಂದು ಅಹವಾಲು ಸ್ವೀಕಾರ ಸಭೆ
More important news
ಫ.೧ ರಂದು ಮಡಿವಾಳ ಮಾಚಿದೇವ ಜಯಂತಿ ಉತ್ಸವ
27/01/2023
ಜ.೨೮ ರಂದು ಸವಿತಾ ಮಹರ್ಷಿ ಜಯಂತಿ ಉತ್ಸವ
27/01/2023
ತರಬೇತಿ ಶಿಬಿರ
27/01/2023
ಶ್ರೀ ಸವಿತಾ ಮಹರ್ಷಿ ಜಯಂತಿ
27/01/2023
ವಿದ್ಯುತ್ ಸರಬರಾಜು ವೇಳೆಯಲ್ಲಿ ಬದಲಾವಣೆ
27/01/2023