ಕೊಪ್ಪಳ ಮಾರ್ಚ್ ೧೭: ಕೊಪ್ಪಳ ಜಿಲ್ಲಾಡಳಿತದಿಂದ ಶ್ರೀ ರೇಣುಕಾಚಾರ್ಯ ಜಯಂತಿಯನ್ನು ಮಾರ್ಚ್ ೧೯ ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಕೆಇಬಿ ರಸ್ತೆ ಶ್ರೀ ಶಿವ ಚಿತ್ರಮಂದಿರ ಹತ್ತಿರದ ಮಹಾಂತಯ್ಯನಮಠ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ.
ರಾಜ್ಯ ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ್ ಸಿಂಗ್ ಅವರು ಕಾರ್ಯಕ್ರಮದ ಉದ್ಘಾಟಿಸುವರು. ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಹಾಲಪ್ಪ ಬಸಪ್ಪ ಆಚಾರ ಘನ ಉಪಸ್ಥಿತರಿರುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್ ಸಮಾರಂಭದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ಕರಡಿ ಸಂಗಣ್ಣ, ಶಾಸಕರುಗಳಾದ ಅಮರೇಗೌಡ ಎಲ್.ಪಾಟೀಲ್ ಬಯ್ಯಾಪೂರ, ಪರಣ್ಣ ಈಶ್ವರಪ್ಪ ಮುನವಳ್ಳಿ ಹಾಗೂ ಬಸವರಾಜ ದಢೇಸೂಗೂರು, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ್ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ನಗರಸಭೆ ಅಧ್ಯಕ್ಷರಾದ ಶಿವಗಂಗಾ ಶಿವರೆಡ್ಡಿ ಭೂಮಕ್ಕನವರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಹಾಂತೇಶ ಎಸ್ ಪಾಟೀಲ್ ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಟಿ.ಕೆ ಅನಿಲಕುಮಾರ್ ಭಾಗವಹಿಸುವರು. ಕಾರ್ಯಕ್ರಮದ ಅಂಗವಾಗಿ ಹಂಪಿ ಸಾವಿರದೇವರಮಠ ಯಮ್ಮಿಗನೂರಿನ ಶ್ರೀ ವಾಮದೇವ ಮಹಾಂತ ಶಿವಾಚಾರ್ಯ ಸ್ವಾಮಿಗಳು ಅವರು ಶ್ರೀ ರೇಣುಕಾಚಾರ್ಯರ ಕುರಿತು ವಿಶೇಷ ಉಪನ್ಯಾಸ ನೀಡುವರು. ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ವಂಟಗೋಡಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕೊಟ್ರೇಶ್ ಮರಬನಳ್ಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ಶ್ರೀ ರೇಣುಕಾಚಾರ್ಯ ಜಯಂತಿ ಮಾ.೧೯ಕ್ಕೆ
More important news
ಲಿಂಗಾಯತ ಸಂಘಟನೆಯಿಂದ ಮಹಿಳಾ ದಿನಾಚರಣೆ
20/03/2023
ಸಾರ್ವಜನಿಕರ ಗಮನಕ್ಕೆ
17/03/2023
ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
17/03/2023
ಸಂತೆ ಕರ ಲಿಲಾವು
16/03/2023