ಕೊಪ್ಪಳ, ನವೆಂಬರ್ ೧೯ : ರಾಷ್ಟ್ರೀಯ ಐಕ್ಯತಾ ಸಪ್ತಾಹ ಕಾರ್ಯಕ್ರಮದ ನಿಮಿತ್ತ ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನವೆಂಬರ್ ೧೯ ರಂದು “ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನ” ಸ್ವೀಕರಿಸಲಾಯಿತು.
ನ. ೧೯ ರಿಂದ ನ. ೨೫ ರವರೆಗೆ “ರಾಷ್ಟ್ರೀಯ ಐಕ್ಯತಾ ಸಪ್ತಾಹ”ವನ್ನು ಆಚರಿಸುವಂತೆ ಸರ್ಕಾರವು ನಿರ್ಧರಿಸಿದ್ದು, ಅದರಂತೆ ರಾಷ್ಟ್ರದ ಸ್ವಾತಂತ್ರö್ಯ ಹಾಗೂ ಐಕ್ಯತೆಯನ್ನು ಬಲಪಡಿಸಲು, ದೇಶದಲ್ಲಿ ಹೆಚ್ಚುತ್ತಿರುವ ಹಿಂಸಾಚಾರ ಮತ್ತು ಕೋಮು ದ್ವೇಷವನ್ನು ತಡೆಗಟ್ಟುವುದಕ್ಕಾಗಿ ಈ ಸಪ್ತಾಹವನ್ನು ಹಮ್ಮಿಕೊಂಡು ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನ ಸ್ವೀಕರಿಸುವ ಕುರಿತಾದ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತದಿಂದ ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನವನ್ನು ಶನಿವಾರದಂದು ಸ್ವೀಕರಿಸಲಾಯಿತು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ.ಕಡಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ್ ಮರಬನಳ್ಳಿ ಅವರು ಎಲ್ಲರಿಗೂ ಪ್ರಮಾಣ ವಚನ ಬೋಧಿಸಿದರು.
Gadi Kannadiga > State > ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನ ಸ್ವೀಕಾರ