ಗದಗ ಸೆ ೧೪ : ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕöÈತಿ ಇಲಾಖೆ ಇವರ ಸಹಯೋಗದಲ್ಲಿ ವಿಶ್ವಕರ್ಮ ಜಯಂತಿ-೨೦೨೩ ಕಾರ್ಯಕ್ರಮವನ್ನು ಸೆಪ್ಟಂಬರ್ ೧೭ ರಂದು ರವಿವಾರ ಮಧ್ಯಾಹ್ನ ೧೨ ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿ ಹಮ್ಮಿಕೊಳ್ಳಲಾಗಿದೆ.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸಲಿದ್ದಾರೆ. ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಮುಖ್ಯಅತಿಥಿಗಳಾಗಿ ಸರ್ಕಾರಿ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹ್ಮದ್, ಸಂಸದರುಗಳಾದ ಶಿವಕುಮಾರ ಉದಾಸಿ, ಪಿ.ಸಿ.ಗದ್ದಿಗೌಡರ, ವಿಧಾನಪರಿಷತ್ ಸದಸ್ಯರುಗಳಾದ ಎಸ್.ವಿ. ಸಂಕನೂರ, ಪ್ರದೀಪ ಶೆಟ್ಟರ, ನರಗುಂದ ಶಾಸಕರಾದ ಸಿ.ಸಿ.ಪಾಟೀಲ, ರೋಣ ಶಾಸಕ ಜಿ.ಎಸ್.ಪಾಟೀಲ, ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ, ಗದಗ ಬೆಟಗೇರಿ ನಗರಸಭೆ ಅಧ್ಯಕ್ಷೆ ಶ್ರೀಮತಿ ಉಷಾ ದಾಸರ, ನಗರಸಭೆ ಉಪಾಧ್ಯಕ್ಷೆ ಶ್ರೀಮತಿ ಸುನಂದಾ ಬಾಕಳೆ ಅವರು ಆಗಮಿಸುವರು.
ವಿಶ್ವಕರ್ಮರ ಜೀವನ ಮತ್ತು ಸಾಧನೆ ಕುರಿತು ಚಿಕ್ಕಹಂದಿಗೋಳದ ವೀರಭದ್ರಪ್ಪ ಕಮ್ಮಾರ ಅವರು ಉಪನ್ಯಾಸ £Ãಡುವರು, ಗದಗಿನ ಪ್ರಸಾದ ಗುರುನಾಥ ಸುತಾರ ಮತ್ತು ಅವರ ತಂಡ ಸುಗಮ ಸಂಗೀತ ಪ್ರಸ್ತುತ ಪಡಿಸುವರು.
ವಾಣಿಜ್ಯ ತೆರಿಗೆ ಆಯುಕ್ತರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಿ.ಶಿಖಾ, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಬಿ.ಎಸ್.ನೇಮಗೌಡ ಸರ್ವರಿಗೂ ಆದರದ ಸ್ವಾಗತ ಕೊರಿದ್ದಾರೆ.
Gadi Kannadiga > State > ವಿಶ್ವಕರ್ಮ ಜಯಂತಿ
ವಿಶ್ವಕರ್ಮ ಜಯಂತಿ
Suresh14/09/2023
posted on
More important news
ಆಯುಷ್ಮಾನ್ ಭವ್; ಕಾರ್ಯಕ್ರಮ
25/09/2023
ನೀರು ಪೂರೈಕೆಯಲ್ಲಿ ವ್ಯತ್ಯಯ
25/09/2023
ಶಿಕ್ಷಣ ಅದಾಲತ್
25/09/2023
ಉದ್ಯಮ ಶೀಲತಾ ಪ್ರೇರಣಾ ಕಾರ್ಯಕ್ರಮ
25/09/2023